- ಕೆ. ಎಸ್. ನರಸಿಂಹಸ್ವಾಮಿ
ರಾಯರು ಬಂದರು ಮಾವನ ಮನೆಗೆ ರಾತ್ರಿಯಾಗಿತ್ತು ಹುಣ್ಣಿಮೆ ಹರಸಿದೆ ಬಾನಿನ ನಡುವೆ ಚಂದಿರ ಬಂದಿತ್ತು
ತುಂಬಿದ ಚಂದಿರ ಬಂದಿತ್ತು ||
ಮಾವನ ಮನೆಯಲಿ ಮಲ್ಲಿಗೆ ಹೂಗಳ ಪರಿಮಳ ತುಂಬಿತ್ತು
ಬಾಗಿಲ ಬಳಿ ಕಾಲಿಗೆ ಬಿಸಿ ನೀರಿನ ತಂಬಿಗೆ ಬಂದಿತ್ತು
ಒಳಗಡೆ ದೀಪದ ಬೆಳಕಿತ್ತು
ಘಮ ಘಮಿಸುವ ಮೃಷ್ಟಾನ್ನದ ಭೋಜನ ರಾಯರ ಕಾದಿತ್ತು
ಬೆಳ್ಳಿಯ ಬಟ್ಟಲ ಗಸಗಸೆ ಪಾಯಸ ರಾಯರ ಕರೆದಿತ್ತು
ಭೂಮಿಗೆ ಸ್ವರ್ಗವೆ ಇಳಿದಿತ್ತು
ಚಪ್ಪರಗಾಲಿನ ಮಂಚದ ಮೇಗಡೆ ಮೆತ್ತನೆ ಹಾಸಿತ್ತು
ಅಪ್ಪಟ ರೇಸಿಮೆ ದಿಂಬಿನ ಅಂಚಿಗೆ ಚಿತ್ರದ ಹೂವಿತ್ತು
ಪದುಮಳು ಹಾಕಿದ ಹೂವಿತ್ತು
ಚಿಗುರೆಲೆ ಬಣ್ಣದ ಅಡಿಕೆಯ ತಂದಳು ನಾದಿನಿ ನಗು ನಗುತಾ
ಬಿಸಿ ಬಿಸಿ ಹಾಲಿನ ಬಟ್ಟಲ ತಂದರು ಅಕ್ಕರೆಯಲಿ ಮಾವ
ಮಡದಿಯ ಸದ್ದೇ ಇರಲಿಲ್ಲ
ಮಡದಿಯ ತಂಗಿಯ ಕರೆದಿಂತೆಂದರು "ಅಕ್ಕನ ಕರೆಯಮ್ಮ"
ಮೆಲು ದನಿಯಲಿ ನಾದಿನಿ ಇಂತೆಂದಳು "ಪದುಮಳು ಒಳಗಿಲ್ಲ"
ನಕ್ಕಳು ರಾಯರು ನಗಲಿಲ್ಲ
ಏರುತ ಇಳಿಯುತ ಬಂದರು ರಾಯರು ದೂರದ ಊರಿಂದ
ಕಣ್ಣನು ಕಡಿದರು ನಿದ್ದೆಯು ಬಾರದು ಪದುಮಳು ಒಳಗಿಲ್ಲ
ಪದುಮಳ ಬಳೆಗಳ ದನಿ ಇಲ್ಲ
ಬೆಳಗಾಯಿತು ಸರಿ ಹೊರಡುವೆನೆಂದರು ರಾಯರು ಮುನಿಸಿನಲಿ
ಒಳಮನೆಯಲಿ "ನೀರಾಯಿತು" ಎಂದಳು ನಾದಿನಿ ರಾಗದಲಿ
"ಯಾರಿಗೆ" ಎನ್ನಲು ಹರುಷದಲಿ
ಪದುಮಳು ಬಂದಳು ಹೂವನು ಮುಡಿಯುತ ರಾಯರ ಕೋಣೆಯಲಿ
Video link:
http://www.youtube.com/watch?v=A6JjAwY7n-M
English lyrics:
http://www.madhurabhavageethegalu.blogspot.com/2012/09/raayaru-bandaru.html
No comments:
Post a Comment
Note: Only a member of this blog may post a comment.