- ಕೆ. ಯೆಸ್. ನರಸಿಂಹಸ್ವಾಮಿ
ಪಯಣಿಸುವ ವೇಳೆಯಲಿ ಬಂದು ಅಡಿಗೆರಗಿಮುಂದೆ ನಿಂದಳು ನನ್ನ ಕೈಹಿಡಿದ ಹುಡುಗಿ ||
ಇನ್ನೆಂದು ಬರುವಿರೆಂದೆನ್ನ ಕೇಳಿದಳು
ಇನ್ನೊಂದು ತಿಂಗಳಿಗೆ ಎಂದು ಹೇಳಿದೆನು
ಕೆನ್ನೆ ಕೆಂಪಾಗಿರಲು ಸಂಜೆ ಮುಗಿಲಂತೆ
ಕಣ್ಣಿರಲು ತಿಳಿಬಾನ ಕಿರು ತಾರೆಯಂತೆ
ವೇಣಿಯಿರಲು ವಸಂತ ಪುಷ್ಪ ವನದಂತೆ
ಮನಸು ಬಾರದು ನನಗೆ ಅಡಿಯನಿಡೆ ಮುಂದೆ
ಅಲ್ಲಲ್ಲಿ ನಿಂದವಳ ನೋಡು ತಡಿಗಡಿಗೆ
ತೆರಳಿದೆನು ವಿರಹದಲಿ ನಿಲ್ದಾಣದೆಡೆಗೆ
ದಾರಿಯಲೆ ಕಂಡೊಬ್ಬ ಹಣ್ಣು ಮಾರುವನು
ಹೊರಟು ಹೋದುದು ಬಂಡಿ ಎಂದು ಹೇಳಿದನು
ಹಿಂದಿರುಗಿ ಬಂದೆನ್ನ ಒಂದೇ ಮಾತಿನಲಿ
ತಿಂಗಳಾಯಿತೆ ಎಂದಳೆನ್ನ ಹೊಸ ಹುಡುಗಿ !
Video link:
http://www.youtube.com/watch?v=6fsVWbOdDOM
English lyrics:
http://www.madhurabhavageethegalu.blogspot.com/2014/02/payanisuva-veleyali.html
No comments:
Post a Comment
Note: Only a member of this blog may post a comment.